ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…