ಆಸ್ಟ್ರೇಲಿಯಾ ವಿರುದ್ದ ಮೊದಲ ಪಂದ್ಯ ಗೆದ್ದು ಬೀಗಿದ ಭಾರತ, ಮೂರು ಮಾದರಿಯಲ್ಲೂ ನಾವೇ ನಂ 1 !

ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.

277 ರನ್ ಗಳ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (74) ಹಾಗೂ ರುತುರಾಜ್ ಗಾಯಕ್ವಾಡ್ (71) ರನ್ ಗಳಿಸುವ ಮೂಲಕ 142 ರನ್ ಗಳ ಜೊತೆಯಾಟ ನಡೆಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.

ಭಾರತದ ಪರವಾಗಿ ಮಿಂಚಿದ ವೇಗಿ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು, ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತು ಹಾಗೂ ಮೂರು ಮಾದರಿಯಲ್ಲೂ ನಂ 1 ತಂಡವಾಗಿ ವಿರಾಜಮಾನರಾಗಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

24 hours ago