ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…