ಮೊಹಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಹಾಗೂ ಬ್ಯಾಟ್ಸ್ಮನಗಳ ಸಂಘಟಿತ ಪ್ರಯತ್ನದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡ ಐದು ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಅವರ ನಂಬಿಕೆಯನ್ನು ಬೌಲಿಂಗ್ ಪಡೆ ಉಳಿಸಿಕೊಂಡರು. ತಂಡದ ಮೊತ್ತ ಐದು ರನ್ ಗಳಿಸುವ ಸಂದರ್ಭದಲ್ಲಿ ಶಮಿ ಅವರ ಬೌಲಿಂಗ್ ನಲ್ಲಿ ಆರಂಭಿಕ ಆಟಗಾರ ಮಿಚೆಲ್ ಮಾಷ್೯ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಡೇವಿಡ್ ವಾರ್ನರ್ (52) ಹಾಗೂ ಸ್ಟೀವನ್ ಸ್ಮಿತ್ (41) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗದಲ್ಲಿ ಲಬುಶನಗೆ (39), ಗ್ರೀನ್ (31), ಜೋಶ್ ಇಂಗ್ಲಿಷ್ (45), ಸ್ಪಾನಿಶ್(29) ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್(21) ಅವರ ಬ್ಯಾಟಿಂಗ್ ಬಲದಿಂದ 276 ರನ್ ಕಲೆಹಾಕಿತು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮ್ಮದ್ ಶಮಿ ಐದು ವಿಕೆಟ್, ಬುಮ್ರಾ, ಜಡೇಜಾ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯಾ ತಂಡವನ್ನು ಆಲೌಟ್ ಮಾಡಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (50) ಹಾಗೂ ನಾಯಕ ಕೆ.ಎಲ್. ರಾಹುಲ್ ಅಜೇಯ (58) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿದರು.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…