ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯ ಕುಮಾರ್ ಗೆ ನಾಯಕತ್ವ ಪಟ್ಟ

ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿ ನಡೆಯಲಿದ್ದು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಬಿಸಿಸಿಐ ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ಪಟ್ಟ ಕಟ್ಟಿದೆ.

ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಲ್ ರೌಂಡರ್ ರವೀಂದ್ರ ಜಡೇಜಾ, ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಶಮಿ, ಸಿರಾಜ್ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ನೀಡಿದೆ.

ಸರಣಿ ನವೆಂಬರ್ 23 ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ವಿಶಾಖಪಟ್ಟಣ, ಎರಡನೇ ಪಂದ್ಯ ನವೆಂಬರ್ 26ರಂದು ತಿರುವನಂತಪುರಂ, ಮೂರನೇ ಪಂದ್ಯ ನವೆಂಬರ್ 28 ರಂದು ಗುಹವಾಟಿ, ನಾಲ್ಕನೇ ಪಂದ್ಯ ಡಿಸೆಂಬರ್ 1 ರಂದು ರಾಯ್ಪುರ ಹಾಗೂ ಕೊನೆಯ ಹಾಗೂ 5 ನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.

ತಂಡದ ವಿವರ: ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವಮಾ೯, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅಷ೯ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಸೇರಲಿದ್ದು ಎರಡು ಪಂದ್ಯಗಳಿಗೆ ಉಪನಾಯಕನಾಗಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago