Categories: ಕೊಡಗು

ಆಸ್ತಿಗಾಗಿ ತಂದೆಯನ್ನು ಕೊಂದ ಆರೋಪಿ ಮಗ ಅಂದರ್

ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದಲ್ಲದೆ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಥೆ ಕಟ್ಟಿದ್ದ ಆರೋಪಿ ಮಗನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಕೂಡುಮಂಗಳೂರು ಗ್ರಾಮದ ಕೆ. ಎಂ. ಚಂದ್ರಶೇಖರ್ (28) ಎಂಬಾತ ತಂದೆಯನ್ನು ಕೊಂದು ಇದೀಗ ಕಂಬಿ ಹಿಂದೆ ಬಿದ್ದಿರುವ ಆರೋಪಿ ಆಗಿದ್ದಾನೆ.

ಕೂಡುಮಂಗಳೂರು ನಿವಾಸಿ ಆಗಿದ್ದ ಮಂಜಣ್ಣ ಎಂಬುವವರ ಮೃತದೇಹ ದಿನಾಂಕ 16.03.2025 ರಂದು ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ ಹರಿಯುತ್ತಿರುವ ಕಾವೇರಿ ಹೊಳೆ ದಡದಲ್ಲಿ ಪತ್ತೆ ಆಗಿತ್ತು. ಅವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿತ್ತು. ಆದರೆ…ಮೃತ ಮಂಜಣ್ಣ ಕೌಟುಂಬಿಕ ಸಮಸ್ಯೆಯಿಂದಾಗಿ ಪತ್ನಿ ಮತ್ತು ಮಕ್ಕಳಿಂದ ಬೇರೆಯಾಗಿ ಒಬ್ಬರೇ ಕೂಡುಮಂಗಳೂರು ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲದೇ ಸುಮಾರು 14 ವರ್ಷಗಳ ಹಿಂದೆ ಕಾಫಿ ಕ್ಯೂರಿಂಗ್ ವರ್ಕ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಿಷಿನ್ ಗೆ ಎಡಗಾಲು ಸಿಲುಕಿ ತುಂಡಾಗಿತ್ತು. ಆದಾಗ್ಯೂ, ನಡೆಯಲು ಕಷ್ಟಸಾಧ್ಯವಾಗಿದ್ದರೂ ಕೂಡ ಮನೆಯಿಂದ ಹಲವು ಕಿ.ಮೀ. ದೂರದಲ್ಲಿರುವ ಚಿಕ್ಕಬೆಟ್ಟಗೇರಿಗೆ ತೆರಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ಅವರ ಪತ್ನಿ ಅನುಮಾನ ವ್ಯಕ್ತಪಡಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆ ಪ್ರಕರಣದ ತನಿಖೆಗಾಗಿ ಸೋಮವಾರಪೇಟೆ ಉಪವಿಭಾಗ ಡಿಎಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಮತ್ತು ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಜಾಡು ಹಿಡಿದು ತನಿಖೆ ಕೈಗೊಂಡ ವಿಶೇಷ ತನಿಖಾ ತಂಡ ಮಾಹಿತಿ ಸಂಗ್ರಹಿಸಿ ಮೃತ ಮಂಜಣ್ಣರವರ ಮಗ ಆರೋಪಿ ಚಂದ್ರಶೇಖರ್ ಕೆ.ಎಂ. (28) ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ತಂದೆಯ ಆಸ್ತಿಗಾಗಿ ಮಗನಿಂದ ಕೊಲೆ

ಮೃತ ಮಂಜಣ್ಣರವರ ಹಣ ಮತ್ತು ಆಸ್ತಿಯ ಸಲುವಾಗಿ ಅವರ ಮಗ ಚಂದ್ರಶೇಖರ್ ತನ್ನ ಸ್ನೇಹಿತರೊಂದಿಗೆ ಕೊಲೆ ಮಾಡುವ ಉದ್ದೇಶದಿಂದ ಮೊದಲೇ ರೂಪಿಸಿದ ಸಂಚಿನಂತೆ ದಿನಾಂಕ 14-03-2025 ರಂದು ಆಲ್ಟೊ ಕಾರಿನಲ್ಲಿ ಕೂಡುಮಂಗಳೂರು ಗ್ರಾಮದಲ್ಲಿನ ಮನೆಯಿಂದ ಮಂಜಣ್ಣರವರನ್ನು ಬಲವಂತದಿಂದ ಎತ್ತಿಕೊಂಡು ಕಾರಿನಲ್ಲಿ ಕೂರಿಸಿ ಕರೆದೊಯ್ದಿದ್ದಾರೆ. ಈ ಸಂದರ್ಭ ಮಂಜಣ್ಣ ಕೂಗಿದಾಗ ಚಂದ್ರಶೇಖರ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಇದರಿಂದ ಪ್ರಜ್ಞೆ ತಪ್ಪಿದ ಮಂಜಣ್ಣ ಸತ್ತಿದ್ದಾರೆ ಎಂದು ಭಾವಿಸಿ, ಚಿಕ್ಕಬೆಟ್ಟಗೇರಿಯಲ್ಲಿ ಕಾವೇರಿ ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

2 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

13 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

15 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

17 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

18 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

1 day ago