Categories: ಕೊಡಗು

ಆಸ್ತಿಗಾಗಿ ತಂದೆಯನ್ನು ಕೊಂದ ಆರೋಪಿ ಮಗ ಅಂದರ್

ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದಲ್ಲದೆ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಥೆ ಕಟ್ಟಿದ್ದ ಆರೋಪಿ ಮಗನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಕೂಡುಮಂಗಳೂರು ಗ್ರಾಮದ ಕೆ. ಎಂ. ಚಂದ್ರಶೇಖರ್ (28) ಎಂಬಾತ ತಂದೆಯನ್ನು ಕೊಂದು ಇದೀಗ ಕಂಬಿ ಹಿಂದೆ ಬಿದ್ದಿರುವ ಆರೋಪಿ ಆಗಿದ್ದಾನೆ.

ಕೂಡುಮಂಗಳೂರು ನಿವಾಸಿ ಆಗಿದ್ದ ಮಂಜಣ್ಣ ಎಂಬುವವರ ಮೃತದೇಹ ದಿನಾಂಕ 16.03.2025 ರಂದು ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ ಹರಿಯುತ್ತಿರುವ ಕಾವೇರಿ ಹೊಳೆ ದಡದಲ್ಲಿ ಪತ್ತೆ ಆಗಿತ್ತು. ಅವರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿತ್ತು. ಆದರೆ…ಮೃತ ಮಂಜಣ್ಣ ಕೌಟುಂಬಿಕ ಸಮಸ್ಯೆಯಿಂದಾಗಿ ಪತ್ನಿ ಮತ್ತು ಮಕ್ಕಳಿಂದ ಬೇರೆಯಾಗಿ ಒಬ್ಬರೇ ಕೂಡುಮಂಗಳೂರು ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲದೇ ಸುಮಾರು 14 ವರ್ಷಗಳ ಹಿಂದೆ ಕಾಫಿ ಕ್ಯೂರಿಂಗ್ ವರ್ಕ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಿಷಿನ್ ಗೆ ಎಡಗಾಲು ಸಿಲುಕಿ ತುಂಡಾಗಿತ್ತು. ಆದಾಗ್ಯೂ, ನಡೆಯಲು ಕಷ್ಟಸಾಧ್ಯವಾಗಿದ್ದರೂ ಕೂಡ ಮನೆಯಿಂದ ಹಲವು ಕಿ.ಮೀ. ದೂರದಲ್ಲಿರುವ ಚಿಕ್ಕಬೆಟ್ಟಗೇರಿಗೆ ತೆರಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ಅವರ ಪತ್ನಿ ಅನುಮಾನ ವ್ಯಕ್ತಪಡಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆ ಪ್ರಕರಣದ ತನಿಖೆಗಾಗಿ ಸೋಮವಾರಪೇಟೆ ಉಪವಿಭಾಗ ಡಿಎಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಮತ್ತು ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಜಾಡು ಹಿಡಿದು ತನಿಖೆ ಕೈಗೊಂಡ ವಿಶೇಷ ತನಿಖಾ ತಂಡ ಮಾಹಿತಿ ಸಂಗ್ರಹಿಸಿ ಮೃತ ಮಂಜಣ್ಣರವರ ಮಗ ಆರೋಪಿ ಚಂದ್ರಶೇಖರ್ ಕೆ.ಎಂ. (28) ಎಂಬಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ತಂದೆಯ ಆಸ್ತಿಗಾಗಿ ಮಗನಿಂದ ಕೊಲೆ

ಮೃತ ಮಂಜಣ್ಣರವರ ಹಣ ಮತ್ತು ಆಸ್ತಿಯ ಸಲುವಾಗಿ ಅವರ ಮಗ ಚಂದ್ರಶೇಖರ್ ತನ್ನ ಸ್ನೇಹಿತರೊಂದಿಗೆ ಕೊಲೆ ಮಾಡುವ ಉದ್ದೇಶದಿಂದ ಮೊದಲೇ ರೂಪಿಸಿದ ಸಂಚಿನಂತೆ ದಿನಾಂಕ 14-03-2025 ರಂದು ಆಲ್ಟೊ ಕಾರಿನಲ್ಲಿ ಕೂಡುಮಂಗಳೂರು ಗ್ರಾಮದಲ್ಲಿನ ಮನೆಯಿಂದ ಮಂಜಣ್ಣರವರನ್ನು ಬಲವಂತದಿಂದ ಎತ್ತಿಕೊಂಡು ಕಾರಿನಲ್ಲಿ ಕೂರಿಸಿ ಕರೆದೊಯ್ದಿದ್ದಾರೆ. ಈ ಸಂದರ್ಭ ಮಂಜಣ್ಣ ಕೂಗಿದಾಗ ಚಂದ್ರಶೇಖರ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಇದರಿಂದ ಪ್ರಜ್ಞೆ ತಪ್ಪಿದ ಮಂಜಣ್ಣ ಸತ್ತಿದ್ದಾರೆ ಎಂದು ಭಾವಿಸಿ, ಚಿಕ್ಕಬೆಟ್ಟಗೇರಿಯಲ್ಲಿ ಕಾವೇರಿ ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago