ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…