ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…