ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…