ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…