ಆಸ್ತಿ ವಿವಾದ: ಮಾವನ ಕೊಲೆಗೆ ಯತ್ನಿಸಿದ ತಂಗಿ ಮಗಳು: ಶೃತಿ & ಗ್ಯಾಂಗ್ ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ‌ ನುಗ್ಗಿ ಕೊಲೆಗೆ‌ ಯತ್ನ: ದೃಶ್ಯ ಸಿಸಿಟಿವಿಯಲ್ಲಿ‌ ಸೆರೆ

ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ‌ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….

ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.

ಇನ್ನೂ ಪ್ರಭು ಮತ್ತು ಶೃತಿ ಸಂಬಂಧಿಕರಾಗಿದ್ದು, ಜಮೀನು ವಿವಾದಕ್ಕೆ ಈ ರೀತಿ ಗೂಂಡಾಗಳನ್ನು ಗುಂಪು ಕಟ್ಟಿಕೊಂಡು ಕೊಲೆ ಪ್ರಯತ್ನ ಮಾಡಿದ್ದಾಳೆ. ಇನ್ನೂ ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭುವನ್ನು ಕೊಲೆ ಮಾಡಲು ಯತ್ನಿಸಿದಾಗ ಮನೆಯ ಕಿಟಕಿ, ಬಾಗಿಲನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಆವಲಹಳ್ಳಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಒಟ್ಟಾರೆ ಮಾವನನ್ನೇ ಕೊಲೆ ಮಾಡಲು ಶೃತಿ ಗೂಂಡಾಗಳನ್ನು ಗ್ಯಾಂಗ್ ಕಟ್ಟಿಕೊಂಡು ಬಂದಿರುವುದು ದುರದೃಷ್ಟಕರ ಸಂಗತಿ. ಏನಾದರೂ ಕಾನೂನಿನ ಮುಂದೆ ಎಲ್ಲರೂ ಒಂದೇ. ಈ ರೀತಿ ಮಧ್ಯೆ ರಾತ್ರಿ ಗ್ಯಾಂಗ್ ಕಟ್ಟಿಕೊಂಡು ರೌಡಿಸಂ ತೋರಿಸಲು ಬಂದವರನ್ನು ಪೊಲೀಸರು ಕೂಡಲೇ ಬಂಧಿಸಬೇಕಿದೆ.

Ramesh Babu

Journalist

Recent Posts

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

5 minutes ago

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

2 hours ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

13 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

1 day ago