ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…