ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.
ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.
ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.
ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.
ವೃದ್ಧ ದಂಪತಿಯು ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.
ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.
ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…