ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

3 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

3 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

11 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago