ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

23 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

6 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

8 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago