ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago