ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago