ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago