ಆಸ್ತಿ ವಿವಾದ: ಹೆತ್ತ ತಂದೆ-ತಾಯಿಯನ್ನ ರಾಡ್ ನಿಂದ ಹೊಡೆದು ಮಗನೇ ಕೊಲೆ ಮಾಡಿರುವ ಶಂಕೆ

ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.

ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.

ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.

ವೃದ್ಧ ದಂಪತಿಯು ಪ್ರತಿ ದಿ‌ನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.

ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.

ಈ ವೇಳೆ‌ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago