ಆಸ್ತಿ ವಿಚಾರವಾಗಿ ವೃದ್ಧ ದಂಪತಿ ಕೊಲೆಯಾಗಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಘಟನೆ ಶನಿವಾರ ಸಂಜೆ ನಡೆದಿದೆ. ತಡವಾಗಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.
ರಾಮಕೃಷ್ಣಪ್ಪ (70), ಮುನಿರಾಮಕ್ಕ (65) ಕೊಲೆಗೀಡಾದ ವೃದ್ಧ ದಂಪತಿ.
ಮಗ ನರಸಿಂಹ ರಾಡ್ ನಿಂದ ಹೊಡೆದು ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಸದ್ಯ ಸೂಲಿಬೆಲೆ ಪೊಲೀಸರು ಮಗ ನರಸಿಂಹನನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಮಗ ನರಸಿಂಹ ಮದುವೆಯಾದಗಲಿಂದಲೂ ತಂದೆ ತಾಯಿ ಬಿಟ್ಟು ಪ್ರತ್ಯೇಕವಾಗಿ ವಾಸವಾಗಿದ್ದ. ವೃದ್ಧ ದಂಪತಿಗೆ ಐದು ಮಂದಿ ಮಕ್ಕಳು ಅದರಲ್ಲಿ ನಾಲ್ಕು ಮಂದಿ ಹೆಣ್ಣು ಮಕ್ಕಳು, ಒಬ್ಬನೆ ಗಂಡು ಮಗ. ಐದು ಮಂದಿ ಮಕ್ಕಳಿಗೂ ಮದುವೆ ಮಾಡಿರುವ ವೃದ್ಧ ದಂಪತಿ. ಮಗ ತಂದೆ ತಾಯಿಯನ್ನ ಹೊರಗಿಟ್ಟಿದ್ದ ಎನ್ನಲಾಗಿದೆ.
ದಂಪತಿ ಹೆಣ್ಣು ಮಕ್ಕಳಿಗೆ ಇರುವ ಆಸ್ತಿಯಲ್ಲಿ ಪಾಲು ಕೊಡಲು ಮುಂದಾಗಿದಕ್ಕೆ ಪ್ರತಿದಿನ ಮಗ ನರಸಿಂಹ ತನ್ನ ತಂದೆ ತಾಯಿ ಬಳಿ ಜಗಳವಾಡುತ್ತಿದ್ದ, ಶನಿವಾರದಂದು ಜಗಳ ತಾರಕಕ್ಕೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿ ತಲೆ ಮರೆಸಿಕೊಳ್ಳದೇ ತನಗೆ ಏನು ತಿಳಿಯದ ಹಾಗೆ ಮನೆಯಲ್ಲಿಯೇ ಇದ್ದ ಎನ್ನಲಾಗಿದೆ.
ವೃದ್ಧ ದಂಪತಿಯು ಪ್ರತಿ ದಿನ ತನ್ನ ಹೆಣ್ಣುಮಕ್ಕಳಿಗೆ ಕರೆ ಮಾಡಿ ಮಾತಾಡುತ್ತಿದ್ದರು, ಅದರೆ ಶನಿವಾರದಿಂದ ಕರೆ ಮಾಡಿರಲಿಲ್ಲ , ಹೀಗಾಗಿ ಅನುಮಾನಗೊಂಡಿದ್ದ ಹೆಣ್ಣುಮಕ್ಕಳು. ಕಿರಿ ಮಗಳು ಮನೆಗೆ ಭೇಟಿ ನೀಡಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು , ತಕ್ಷಣ ತಂದೆ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಇಬ್ಬರ ನಂಬರ್ ಸ್ವಿಚ್ ಆಫ್ ಅಗಿತ್ತು.
ಆತಂಕಗೊಂಡು ಸುಲಿಬೆಲೆಯಲ್ಲಿ ಇರುವ ತನ್ನ ಅಕ್ಕನ ಮನೆಗೆ ಹೋಗಿ ಮರಳಿ ತಂದೆ ತಾಯಿ ಮನೆಯ ಬಳಿ ಬಂದಿದ್ದರು.
ಈ ವೇಳೆ ಮನೆಯ ಹೊರಗಿನ ಬಾತ್ ರೂಂ ಬೀಗ ಯಾರೋ ತೆರೆದಿರುವುದು ಗಮನಿಸಿದ್ದಾರೆ. ತಕ್ಷಣ ಮನೆಯ ಬಾಗಿಲನ್ನು ಹೊಡೆದು ಒಳಗೆ ಹೋಗಿದ್ದಾರೆ. ಬಾಗಿಲ ಬಳಿಯೇ ತಂದೆಯ ಮೃತ ದೇಹ ಮತ್ತು ಅಡುಗೆ ಮನೆಯ ಬಳಿ ತಾಯಿ ಮೃತ ದೇಹ ನೋಡಿ ಶಾಕ್ ಆಗಿದ್ದಾರೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…