ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಜಕ್ಕೇರುಮಡಗು ತಾಂಡಾದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಂದವ್ವ (55) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಚಂದವ್ವ ಅವರ ಪುತ್ರ ಕುಮಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಿತ್ರಾರ್ಜಿತವಾಗಿ ದೊರೆತ ಮೂರು ಎಕರೆ ಭೂಮಿಯನ್ನು ಪಾಲು ಮಾಡುವಂತೆ ಕುಮಾರ ತಾಯಿಯ ಮೇಲೆ ನಿರಂತರವಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಣ್ಣ-ತಮ್ಮಂದಿರಿಗೆ ಪಾಲು ಮಾಡಿ, ನನ್ನ ಪಾಲು ನನಗೆ ನೀಡಬೇಕು ಎಂದು ಕುಮಾರ ಆಗ್ರಹಿಸಿದ್ದಾನೆ. ಆದರೆ, ನಾನು ಬದುಕಿರುವವರೆಗೆ ಆಸ್ತಿ ಪಾಲು ಮಾಡುವುದಿಲ್ಲ ಎಂದು ಚಂದವ್ವ ಹಠ ಹಿಡಿದಿದ್ದಾಳೆ.
ಇದೇ ಕಾರಣದಿಂದ ಕೋಪಗೊಂಡ ಕುಮಾರ ಮದ್ಯ ಸೇವಿಸಿ, ನಶೆಯಲ್ಲಿದ್ದ ವೇಳೆ ಮಲಗಿದ್ದ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…