ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಹತ್ವದ ಸಭೆ: ಸಭೆ ಪ್ರಮುಖಾಂಶಗಳು ಇಲ್ಲಿವೆ‌ ಓದಿ..

ಬಜೆಟ್‌ನಲ್ಲಿ ಘೋಷಣೆಗೊಂಡಿರುವ ಅಂಶಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಚರ್ಚೆ ನಡೆಸಿದರು.

ಪಡಿತರ ಚೀಟಿ ಸಂಬಂಧಿತವಾಗಿ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಪರಿಷ್ಕರಣೆ ಪೂರ್ಣಗೊಂಡ ನಂತರ, ಹೊಸ ಪಡಿತರ ಕಾರ್ಡ್‌ಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.

ಇಲಾಖೆಯಲ್ಲಿ ಅನುಷ್ಠಾನ ಮಾಡಲು ನಿರ್ದೇಶಿಸಿರುವ ಅಂಶಗಳು:

• ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನ ಬಳಸುವ ನಿರ್ಧಾರ. 5 ಕೋಟಿ ವೆಚ್ಚದಲ್ಲಿ:
– ಸಗಟು ಗೋದಾಮುಗಳಿಗೆ CCTV ಅಳವಡಿಕೆ
– GPS ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ
– Command Control Centre ಸ್ಥಾಪನೆ

• 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ತಲುಪಿಸುವ “ಅನ್ನ-ಸುವಿಧಾ” ಯೋಜನೆಯ ವ್ಯಾಪ್ತಿಯನ್ನು 75 ವರ್ಷ ಮೇಲ್ಪಟ್ಟವರಿಗೆ ವಿಸ್ತರಿಸುವ ಬಗ್ಗೆ ಚರ್ಚೆ.
– ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ.

• ನ್ಯಾಯಬೆಲೆ ಅಂಗಡಿಗಳಲ್ಲಿ Electronic Weighing Machine ಮತ್ತು Point of Sale System‌ಗಳನ್ನು IT ವ್ಯವಸ್ಥೆಯೊಂದಿಗೆ ಸಂಯೋಜಿಸಲು ಕ್ರಮ

• ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶವನ್ನು ಪ್ರತಿ ಕ್ವಿಂಟಾಲ್‌ಗಾಗಿ ರೂ. 35 ರಿಂದ ರೂ. 45ಕ್ಕೆ ಹೆಚ್ಚಿಸುವ ನಿರ್ಧಾರ

• ಹೊಸ ನ್ಯಾಯಬೆಲೆ ಅಂಗಡಿಗಳನ್ನು ಅವಶ್ಯಕತೆಗನುಗುಣವಾಗಿ ಪ್ರಾರಂಭಿಸಲು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡುವು ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತ ವಾಸಿ ರೆಡ್ಡಿ ವಿಜಯಜ್ಯೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್, ಮತ್ತು ಕಾನೂನು ಮಾಪನ ಇಲಾಖೆ ನಿಯಂತ್ರಕ ಎಂ.ಎಸ್.ಎನ್. ಬಾಬು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

2 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

12 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

13 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

18 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

19 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

23 hours ago