ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಹತ್ವದ ಸಭೆ: ಸಭೆ ಪ್ರಮುಖಾಂಶಗಳು ಇಲ್ಲಿವೆ‌ ಓದಿ..

ಬಜೆಟ್‌ನಲ್ಲಿ ಘೋಷಣೆಗೊಂಡಿರುವ ಅಂಶಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಚರ್ಚೆ ನಡೆಸಿದರು.

ಪಡಿತರ ಚೀಟಿ ಸಂಬಂಧಿತವಾಗಿ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಪರಿಷ್ಕರಣೆ ಪೂರ್ಣಗೊಂಡ ನಂತರ, ಹೊಸ ಪಡಿತರ ಕಾರ್ಡ್‌ಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.

ಇಲಾಖೆಯಲ್ಲಿ ಅನುಷ್ಠಾನ ಮಾಡಲು ನಿರ್ದೇಶಿಸಿರುವ ಅಂಶಗಳು:

• ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನ ಬಳಸುವ ನಿರ್ಧಾರ. 5 ಕೋಟಿ ವೆಚ್ಚದಲ್ಲಿ:
– ಸಗಟು ಗೋದಾಮುಗಳಿಗೆ CCTV ಅಳವಡಿಕೆ
– GPS ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ
– Command Control Centre ಸ್ಥಾಪನೆ

• 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ತಲುಪಿಸುವ “ಅನ್ನ-ಸುವಿಧಾ” ಯೋಜನೆಯ ವ್ಯಾಪ್ತಿಯನ್ನು 75 ವರ್ಷ ಮೇಲ್ಪಟ್ಟವರಿಗೆ ವಿಸ್ತರಿಸುವ ಬಗ್ಗೆ ಚರ್ಚೆ.
– ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ.

• ನ್ಯಾಯಬೆಲೆ ಅಂಗಡಿಗಳಲ್ಲಿ Electronic Weighing Machine ಮತ್ತು Point of Sale System‌ಗಳನ್ನು IT ವ್ಯವಸ್ಥೆಯೊಂದಿಗೆ ಸಂಯೋಜಿಸಲು ಕ್ರಮ

• ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶವನ್ನು ಪ್ರತಿ ಕ್ವಿಂಟಾಲ್‌ಗಾಗಿ ರೂ. 35 ರಿಂದ ರೂ. 45ಕ್ಕೆ ಹೆಚ್ಚಿಸುವ ನಿರ್ಧಾರ

• ಹೊಸ ನ್ಯಾಯಬೆಲೆ ಅಂಗಡಿಗಳನ್ನು ಅವಶ್ಯಕತೆಗನುಗುಣವಾಗಿ ಪ್ರಾರಂಭಿಸಲು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡುವು ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತ ವಾಸಿ ರೆಡ್ಡಿ ವಿಜಯಜ್ಯೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್, ಮತ್ತು ಕಾನೂನು ಮಾಪನ ಇಲಾಖೆ ನಿಯಂತ್ರಕ ಎಂ.ಎಸ್.ಎನ್. ಬಾಬು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago