ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಡ್ಡಾಯವಾಗಿ ಎಲ್ಲಾ ಆಹಾರ ಘಟಕಗಳು ಪಾಲಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳು, ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿ, ನೋಂದಣಿ/ಪರವಾನಗಿ ಪಡೆಯದ ಸಂಸ್ಥೆಗಳು ಶೀಘ್ರ ನೋಂದಣಿ ಮಾಡಿಸಲು ಸೂಚಿಸಿದರು.

ಸಾರ್ವಜನಿಕ ಪ್ರದೇಶಗಳಲ್ಲಿನ ಖಾಸಗಿ, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಗಳು, ರೆಸ್ಟೋರೆಂಟ್, ಬೇಕರಿ, ಕಾರ್ಖಾನೆಗಳ ಕ್ಯಾಂಟೀನ್ ಗಳು ಸೇರಿದಂತೆ ಮುಂತಾದ ಆಹಾರ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಕೃತಕ ಬಣ್ಣ ಬಳಸಿ ಆಹಾರ ತಯಾರಿಸುವುದು, ಕಳಪೆ ಆಹಾರ, ಪರವಾನಗಿ ಇಲ್ಲದೆ ನಡೆಸುವ ಉದ್ದಿಮೆಗಳಿಗೆ ಹಿಂಜರಿಯದೆ ಸೂಕ್ತ ಕ್ರಮ ಜರುಗಿಸಿ ಎಂದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ 2024 ರ ಎಪ್ರಿಲ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಜಿಲ್ಲೆಯಲ್ಲಿ 311 ಆಹಾರ ಘಟಕಗಳ ತಪಾಸಣೆ ನಡೆಸಿ, 55 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 27 ಘಟಕಗಳಿಗೆ ದಂಡ ವಿಧಿಸಿ 90,000 ದಂಡ ಸಂಗ್ರಹಿಸಲಾಗಿದೆ ಎಂದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರುಪಣಾಧಿಕಾರಿ ಅನಿತಾ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

8 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

17 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

19 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

20 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago