ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಡ್ಡಾಯವಾಗಿ ಎಲ್ಲಾ ಆಹಾರ ಘಟಕಗಳು ಪಾಲಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳು, ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿ, ನೋಂದಣಿ/ಪರವಾನಗಿ ಪಡೆಯದ ಸಂಸ್ಥೆಗಳು ಶೀಘ್ರ ನೋಂದಣಿ ಮಾಡಿಸಲು ಸೂಚಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿನ ಖಾಸಗಿ, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಗಳು, ರೆಸ್ಟೋರೆಂಟ್, ಬೇಕರಿ, ಕಾರ್ಖಾನೆಗಳ ಕ್ಯಾಂಟೀನ್ ಗಳು ಸೇರಿದಂತೆ ಮುಂತಾದ ಆಹಾರ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಕೃತಕ ಬಣ್ಣ ಬಳಸಿ ಆಹಾರ ತಯಾರಿಸುವುದು, ಕಳಪೆ ಆಹಾರ, ಪರವಾನಗಿ ಇಲ್ಲದೆ ನಡೆಸುವ ಉದ್ದಿಮೆಗಳಿಗೆ ಹಿಂಜರಿಯದೆ ಸೂಕ್ತ ಕ್ರಮ ಜರುಗಿಸಿ ಎಂದರು.
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ 2024 ರ ಎಪ್ರಿಲ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಜಿಲ್ಲೆಯಲ್ಲಿ 311 ಆಹಾರ ಘಟಕಗಳ ತಪಾಸಣೆ ನಡೆಸಿ, 55 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 27 ಘಟಕಗಳಿಗೆ ದಂಡ ವಿಧಿಸಿ 90,000 ದಂಡ ಸಂಗ್ರಹಿಸಲಾಗಿದೆ ಎಂದರು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರುಪಣಾಧಿಕಾರಿ ಅನಿತಾ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…