ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಡ್ಡಾಯವಾಗಿ ಎಲ್ಲಾ ಆಹಾರ ಘಟಕಗಳು ಪಾಲಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳು, ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿ, ನೋಂದಣಿ/ಪರವಾನಗಿ ಪಡೆಯದ ಸಂಸ್ಥೆಗಳು ಶೀಘ್ರ ನೋಂದಣಿ ಮಾಡಿಸಲು ಸೂಚಿಸಿದರು.

ಸಾರ್ವಜನಿಕ ಪ್ರದೇಶಗಳಲ್ಲಿನ ಖಾಸಗಿ, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಗಳು, ರೆಸ್ಟೋರೆಂಟ್, ಬೇಕರಿ, ಕಾರ್ಖಾನೆಗಳ ಕ್ಯಾಂಟೀನ್ ಗಳು ಸೇರಿದಂತೆ ಮುಂತಾದ ಆಹಾರ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಕೃತಕ ಬಣ್ಣ ಬಳಸಿ ಆಹಾರ ತಯಾರಿಸುವುದು, ಕಳಪೆ ಆಹಾರ, ಪರವಾನಗಿ ಇಲ್ಲದೆ ನಡೆಸುವ ಉದ್ದಿಮೆಗಳಿಗೆ ಹಿಂಜರಿಯದೆ ಸೂಕ್ತ ಕ್ರಮ ಜರುಗಿಸಿ ಎಂದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ 2024 ರ ಎಪ್ರಿಲ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಜಿಲ್ಲೆಯಲ್ಲಿ 311 ಆಹಾರ ಘಟಕಗಳ ತಪಾಸಣೆ ನಡೆಸಿ, 55 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 27 ಘಟಕಗಳಿಗೆ ದಂಡ ವಿಧಿಸಿ 90,000 ದಂಡ ಸಂಗ್ರಹಿಸಲಾಗಿದೆ ಎಂದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರುಪಣಾಧಿಕಾರಿ ಅನಿತಾ ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

4 minutes ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

18 minutes ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

11 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

13 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

14 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

14 hours ago