Categories: ಲೇಖನ

“ಆಹಾರ ನೀತಿ ಸಂಹಿತೆ – 2025” ಜಾರಿಗೆ ಒತ್ತಾಯ

” ಅನ್ನ ದೇವರ ಮುಂದೆ

ಅನ್ಯ ದೇವರು ಉಂಟೆ,
ಅನ್ನವಿರುವತನಕ ಪ್ರಾಣವು,
ಜಗದೊಳಗನ್ನವೇ ದೈವ ಸರ್ವಜ್ಞ…….”

ವಿಶ್ವ ಆಹಾರ ದಿನದ ಸಂದರ್ಭದಲ್ಲಿ…..
ಅಕ್ಟೋಬರ್ 16…..

” ಆಹಾರ ನೀತಿ ಸಂಹಿತೆ – 2025 ”

ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ “ಆಹಾರ ನೀತಿ ಸಂಹಿತೆ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ…..

ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನಗಳನ್ನು ಸ್ವಾಗತಿಸುತ್ತಾ……

ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳು ‌……..

1) ಆಹಾರ ಸಂರಕ್ಷಣೆಗಾಗಿ ಆಹಾರ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಕೂಡಲೇ ಜಾರಿಗೊಳಿಸಬೇಕು.

2) ಆಹಾರ ಸಂರಕ್ಷಣೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸುವ ದಿಸೆಯಲ್ಲಿ ಶಾಲಾ ಪಠ್ಯದಲ್ಲಿ ಈ ವಿಷಯವನ್ನು ಅಳವಡಿಸಬೇಕು.

3) ಸಾರ್ವಜನಿಕ ಸಭೆ – ಸಮಾರಂಭಗಳಲ್ಲಿ ಆಹಾರ ಪೋಲಾಗುವುದನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು.

4) ವಿವಿಧ ಮಾಧ್ಯಮಗಳ ಮೂಲಕ ಸರ್ಕಾರ ನೀಡುವ ಜಾಹೀರಾತಿನಲ್ಲಿ ಆಹಾರ ಸಂರಕ್ಷಣೆ ಕುರಿತಂತೆ ಅರಿವು ಮೂಡಿಸುವುದು. ( ಧೂಮಪಾನ ಮತ್ತು ಮದ್ಯಪಾನದ ಅಪಾಯ ಕುರಿತು ಎಚ್ಚರಿಸುವಂತೆ. )

5) ಪ್ರತಿ ವರ್ಷ ಅಕ್ಟೋಬರ್ 16 ರಂದು ಸರ್ಕಾರದ ವತಿಯಿಂದ ವಿಶ್ವ ಆಹಾರ ದಿನವನ್ನು ರಾಜ್ಯ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸುವ ಮೂಲಕ ಆಹಾರ ಸಂರಕ್ಷಣೆ ಕುರಿತು ತಿಳಿವಳಿಕೆ ಮೂಡಿಸುವುದು.

6) ಆಹಾರ ಸಂರಕ್ಷಣೆ ಕುರಿತು ರೂಪುರೇಷೆಗಳ ಕರಡು ತಯಾರಿಕೆಗಾಗಿ ಕೃಷಿ ಮತ್ತು ಆಹಾರ ತಜ್ಞರನ್ನೊಳಗೊಂಡ ಸಮನ್ವಯ ಸಮಿತಿಯನ್ನು ರಚಿಸುವ ಮೂಲಕ ಆಹಾರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು.

7) ರಾಜ್ಯಾದ್ಯಂತ ಕಲ್ಯಾಣ ಮಂಟಪಗಳಲ್ಲಿ ಆಹಾರದ ಮಹತ್ವ ಸಾರುವ ಬರಹಗಳ ಫಲಕವನ್ನು ಅಳವಡಿಸಬೇಕು.

8) ರಾಜ್ಯದಾದ್ಯಂತ ಹೋಟೆಲು ಮತ್ತು ರೆಸ್ಟೋರೆಂಟ್, ಬೇಕರಿ, ಉಪಹಾರ ಮಂದಿರಗಳಲ್ಲಿ ಆಹಾರದ ಮಹತ್ವ ಸಾರುವ ಮತ್ತು ಆಹಾರ ವ್ಯರ್ಥ ಮಾಡದಿರುವ ಬಗ್ಗೆ ಫಲಕವನ್ನು ಅಳವಡಿಸಬೇಕು.

9) ಯಾವುದೇ ಮನರಂಜನಾ ಉದ್ಯಮಗಳಾದ ಧಾರವಾಹಿ, ಸಿನಿಮಾಗಳಲ್ಲಿ ಅಥವಾ ರಾಜಕೀಯ ಕಾರ್ಯಕ್ರಮಗಳಲ್ಲಿ ವ್ಯಕ್ತಿಗಳಿಗೆ ಹಾಲು , ಹಣ್ಣು ತರಕಾರಿ ಮುಂತಾದ ಆಹಾರ ಪದಾರ್ಥಗಳನ್ನು ಚೆಲ್ಲುವ, ನಾಶಮಾಡುವ ಅಥವಾ ದುರುಪಯೋಗಪಡಿಸುವುದನ್ನು ದಂಡಾರ್ಹ ಅಪರಾಧವೆಂದು ಘೋಷಿಸಬೇಕು / ನಿಷೇಧಿಸಬೇಕು.

10) ಈ ಜಾಗೃತಿಯ ಅನುಷ್ಠಾನಕ್ಕಾಗಿ ನೀತಿ ನಿಯಮಗಳನ್ನು ರೂಪಿಸಲು
” ಆಹಾರ ನೀತಿ ಸಂಹಿತೆಯ ” ಅಧ್ಯಯನ ಸಮಿತಿ ರಚಿಸಬೇಕು.
ಇದಕ್ಕೆ ಕನಿಷ್ಠ ಆರು ತಿಂಗಳ ಕಾಲಾವಧಿ ನಿಗದಿಪಡಿಸಬೇಕು.

11) ಇದರಲ್ಲಿ ಕನಿಷ್ಠ ‌ಹತ್ತು ಜನರ ವಿಷಯ ತಜ್ಞರನ್ನು ನೇಮಿಸಬೇಕು.
ಆಹಾರ ಇಲಾಖೆಯ ಕಾರ್ಯದರ್ಶಿ,
ಕಾನೂನು ಸಲಹೆಗಾರರು,
ಆಹಾರ ಜಾಗೃತಿ ಅಭಿಯಾನದ ಇಬ್ಬರು ಸದಸ್ಯರು,
ರೈತ ಮುಖಂಡರು,
ಆಹಾರ ಸಂಶೋಧನಾ ಕೇಂದ್ರದ ನಿರ್ದೇಶಕರು,
ಅಡಿಗೆ ಗುತ್ತಿಗೆದಾರರು,
ಹೋಟೆಲ್ ಮಾಲೀಕರ ಪ್ರತಿನಿಧಿ
ಕಡ್ಡಾಯವಾಗಿ ಇರಬೇಕು…

ಈ ಅಧ್ಯಯನ ವರದಿಯನ್ನು ಪರಿಶೀಲಿಸಿ ಕಾನೂನಾತ್ಮಕ ಜಾರಿ ಮಾಡಲು ಕಾಲ ಮಿತಿಯೊಳಗೆ ಶೀಘ್ರ ಕ್ರಮ ಕೈಗೊಳ್ಳಬೇಕು….

ಇದು ಕೆಲವು ಸಲಹೆಗಳಷ್ಟೆ. ಇದಕ್ಕಿಂತ ಉತ್ತಮ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ ಜಾರಿಗೊಳಿಸಬೇಕು…..

ಇದರಿಂದಾಗಿ ಕೃಷಿ ಭೂಮಿಯ ಮೇಲಿನ ಒತ್ತಡ, ಆಹಾರದ ಹಂಚಿಕೆಯ ಮೇಲಿನ ಒತ್ತಡ, ಪೌಷ್ಟಿಕಾಂಶ ಕೊರತೆಯ ಮೇಲಿನ ಒತ್ತಡ ಕಡಿಮೆಯಾಗುತ್ತದೆ….

ಪಾಶ್ಚಾತ್ಯ ದೇಶಗಳಲ್ಲಿ ನಾಗರಿಕ ಪ್ರಜ್ಞೆಯ ಕಾರಣದಿಂದ, ಇಸ್ಲಾಮಿಕ್ ದೇಶಗಳಲ್ಲಿ ಧಾರ್ಮಿಕ ನಂಬಿಕೆಯ ಕಾರಣ, ಬೌದ್ದ ಧರ್ಮದಲ್ಲಿ ಭಿಕ್ಷಾಟನೆ ನೀತಿಯ ಕಾರಣದಿಂದ, ಲಿಂಗಾಯತ ಸಮುದಾಯದಲ್ಲಿ ಶ್ರಮದ ಅನುಭಾವದ ಕಾರಣದಿಂದ ಆಹಾರ ವ್ಯರ್ಥವಾಗುವುದು ಕಡಿಮೆ. ಅದನ್ನು ಹೊರತುಪಡಿಸಿ ಭಾರತದಲ್ಲಿ ಬಹುತೇಕ ಶ್ರೀಮಂತರ ಒಣ ಪ್ರದರ್ಶನದ ಕಾರಣ ಆಹಾರ ತಯಾರಾದ ನಂತರ ಅತ್ಯಂತ ಹೆಚ್ಚು ನಷ್ಟವಾಗುತ್ತದೆ. ಅದನ್ನು ನಾವೆಲ್ಲರೂ ಸೇರಿ ತಡೆಗಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

2 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

12 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

23 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

23 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago