Categories: ಲೇಖನ

“ಆಹಾರ ನೀತಿ ಸಂಹಿತೆ – 2025” ಜಾರಿಗೆ ಒತ್ತಾಯ

” ಅನ್ನ ದೇವರ ಮುಂದೆ

ಅನ್ಯ ದೇವರು ಉಂಟೆ,
ಅನ್ನವಿರುವತನಕ ಪ್ರಾಣವು,
ಜಗದೊಳಗನ್ನವೇ ದೈವ ಸರ್ವಜ್ಞ…….”

ವಿಶ್ವ ಆಹಾರ ದಿನದ ಸಂದರ್ಭದಲ್ಲಿ…..
ಅಕ್ಟೋಬರ್ 16…..

” ಆಹಾರ ನೀತಿ ಸಂಹಿತೆ – 2025 ”

ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ “ಆಹಾರ ನೀತಿ ಸಂಹಿತೆ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ…..

ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನಗಳನ್ನು ಸ್ವಾಗತಿಸುತ್ತಾ……

ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳು ‌……..

1) ಆಹಾರ ಸಂರಕ್ಷಣೆಗಾಗಿ ಆಹಾರ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಕೂಡಲೇ ಜಾರಿಗೊಳಿಸಬೇಕು.

2) ಆಹಾರ ಸಂರಕ್ಷಣೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸುವ ದಿಸೆಯಲ್ಲಿ ಶಾಲಾ ಪಠ್ಯದಲ್ಲಿ ಈ ವಿಷಯವನ್ನು ಅಳವಡಿಸಬೇಕು.

3) ಸಾರ್ವಜನಿಕ ಸಭೆ – ಸಮಾರಂಭಗಳಲ್ಲಿ ಆಹಾರ ಪೋಲಾಗುವುದನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು.

4) ವಿವಿಧ ಮಾಧ್ಯಮಗಳ ಮೂಲಕ ಸರ್ಕಾರ ನೀಡುವ ಜಾಹೀರಾತಿನಲ್ಲಿ ಆಹಾರ ಸಂರಕ್ಷಣೆ ಕುರಿತಂತೆ ಅರಿವು ಮೂಡಿಸುವುದು. ( ಧೂಮಪಾನ ಮತ್ತು ಮದ್ಯಪಾನದ ಅಪಾಯ ಕುರಿತು ಎಚ್ಚರಿಸುವಂತೆ. )

5) ಪ್ರತಿ ವರ್ಷ ಅಕ್ಟೋಬರ್ 16 ರಂದು ಸರ್ಕಾರದ ವತಿಯಿಂದ ವಿಶ್ವ ಆಹಾರ ದಿನವನ್ನು ರಾಜ್ಯ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸುವ ಮೂಲಕ ಆಹಾರ ಸಂರಕ್ಷಣೆ ಕುರಿತು ತಿಳಿವಳಿಕೆ ಮೂಡಿಸುವುದು.

6) ಆಹಾರ ಸಂರಕ್ಷಣೆ ಕುರಿತು ರೂಪುರೇಷೆಗಳ ಕರಡು ತಯಾರಿಕೆಗಾಗಿ ಕೃಷಿ ಮತ್ತು ಆಹಾರ ತಜ್ಞರನ್ನೊಳಗೊಂಡ ಸಮನ್ವಯ ಸಮಿತಿಯನ್ನು ರಚಿಸುವ ಮೂಲಕ ಆಹಾರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು.

7) ರಾಜ್ಯಾದ್ಯಂತ ಕಲ್ಯಾಣ ಮಂಟಪಗಳಲ್ಲಿ ಆಹಾರದ ಮಹತ್ವ ಸಾರುವ ಬರಹಗಳ ಫಲಕವನ್ನು ಅಳವಡಿಸಬೇಕು.

8) ರಾಜ್ಯದಾದ್ಯಂತ ಹೋಟೆಲು ಮತ್ತು ರೆಸ್ಟೋರೆಂಟ್, ಬೇಕರಿ, ಉಪಹಾರ ಮಂದಿರಗಳಲ್ಲಿ ಆಹಾರದ ಮಹತ್ವ ಸಾರುವ ಮತ್ತು ಆಹಾರ ವ್ಯರ್ಥ ಮಾಡದಿರುವ ಬಗ್ಗೆ ಫಲಕವನ್ನು ಅಳವಡಿಸಬೇಕು.

9) ಯಾವುದೇ ಮನರಂಜನಾ ಉದ್ಯಮಗಳಾದ ಧಾರವಾಹಿ, ಸಿನಿಮಾಗಳಲ್ಲಿ ಅಥವಾ ರಾಜಕೀಯ ಕಾರ್ಯಕ್ರಮಗಳಲ್ಲಿ ವ್ಯಕ್ತಿಗಳಿಗೆ ಹಾಲು , ಹಣ್ಣು ತರಕಾರಿ ಮುಂತಾದ ಆಹಾರ ಪದಾರ್ಥಗಳನ್ನು ಚೆಲ್ಲುವ, ನಾಶಮಾಡುವ ಅಥವಾ ದುರುಪಯೋಗಪಡಿಸುವುದನ್ನು ದಂಡಾರ್ಹ ಅಪರಾಧವೆಂದು ಘೋಷಿಸಬೇಕು / ನಿಷೇಧಿಸಬೇಕು.

10) ಈ ಜಾಗೃತಿಯ ಅನುಷ್ಠಾನಕ್ಕಾಗಿ ನೀತಿ ನಿಯಮಗಳನ್ನು ರೂಪಿಸಲು
” ಆಹಾರ ನೀತಿ ಸಂಹಿತೆಯ ” ಅಧ್ಯಯನ ಸಮಿತಿ ರಚಿಸಬೇಕು.
ಇದಕ್ಕೆ ಕನಿಷ್ಠ ಆರು ತಿಂಗಳ ಕಾಲಾವಧಿ ನಿಗದಿಪಡಿಸಬೇಕು.

11) ಇದರಲ್ಲಿ ಕನಿಷ್ಠ ‌ಹತ್ತು ಜನರ ವಿಷಯ ತಜ್ಞರನ್ನು ನೇಮಿಸಬೇಕು.
ಆಹಾರ ಇಲಾಖೆಯ ಕಾರ್ಯದರ್ಶಿ,
ಕಾನೂನು ಸಲಹೆಗಾರರು,
ಆಹಾರ ಜಾಗೃತಿ ಅಭಿಯಾನದ ಇಬ್ಬರು ಸದಸ್ಯರು,
ರೈತ ಮುಖಂಡರು,
ಆಹಾರ ಸಂಶೋಧನಾ ಕೇಂದ್ರದ ನಿರ್ದೇಶಕರು,
ಅಡಿಗೆ ಗುತ್ತಿಗೆದಾರರು,
ಹೋಟೆಲ್ ಮಾಲೀಕರ ಪ್ರತಿನಿಧಿ
ಕಡ್ಡಾಯವಾಗಿ ಇರಬೇಕು…

ಈ ಅಧ್ಯಯನ ವರದಿಯನ್ನು ಪರಿಶೀಲಿಸಿ ಕಾನೂನಾತ್ಮಕ ಜಾರಿ ಮಾಡಲು ಕಾಲ ಮಿತಿಯೊಳಗೆ ಶೀಘ್ರ ಕ್ರಮ ಕೈಗೊಳ್ಳಬೇಕು….

ಇದು ಕೆಲವು ಸಲಹೆಗಳಷ್ಟೆ. ಇದಕ್ಕಿಂತ ಉತ್ತಮ ಸಲಹೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ ಜಾರಿಗೊಳಿಸಬೇಕು…..

ಇದರಿಂದಾಗಿ ಕೃಷಿ ಭೂಮಿಯ ಮೇಲಿನ ಒತ್ತಡ, ಆಹಾರದ ಹಂಚಿಕೆಯ ಮೇಲಿನ ಒತ್ತಡ, ಪೌಷ್ಟಿಕಾಂಶ ಕೊರತೆಯ ಮೇಲಿನ ಒತ್ತಡ ಕಡಿಮೆಯಾಗುತ್ತದೆ….

ಪಾಶ್ಚಾತ್ಯ ದೇಶಗಳಲ್ಲಿ ನಾಗರಿಕ ಪ್ರಜ್ಞೆಯ ಕಾರಣದಿಂದ, ಇಸ್ಲಾಮಿಕ್ ದೇಶಗಳಲ್ಲಿ ಧಾರ್ಮಿಕ ನಂಬಿಕೆಯ ಕಾರಣ, ಬೌದ್ದ ಧರ್ಮದಲ್ಲಿ ಭಿಕ್ಷಾಟನೆ ನೀತಿಯ ಕಾರಣದಿಂದ, ಲಿಂಗಾಯತ ಸಮುದಾಯದಲ್ಲಿ ಶ್ರಮದ ಅನುಭಾವದ ಕಾರಣದಿಂದ ಆಹಾರ ವ್ಯರ್ಥವಾಗುವುದು ಕಡಿಮೆ. ಅದನ್ನು ಹೊರತುಪಡಿಸಿ ಭಾರತದಲ್ಲಿ ಬಹುತೇಕ ಶ್ರೀಮಂತರ ಒಣ ಪ್ರದರ್ಶನದ ಕಾರಣ ಆಹಾರ ತಯಾರಾದ ನಂತರ ಅತ್ಯಂತ ಹೆಚ್ಚು ನಷ್ಟವಾಗುತ್ತದೆ. ಅದನ್ನು ನಾವೆಲ್ಲರೂ ಸೇರಿ ತಡೆಗಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

1 hour ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

8 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

11 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

23 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago