ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಲಾಗುವುದೆಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನ್ವಯ ಆಹಾರ ಪ್ರತಿಯೊಬ್ಬ ಬಡವರಿಗೆ ನಿರ್ಗತಿಕರಿಗೆ ಸರಕಾರವು ದುರ್ಬಲರಿಗೆ, ಮಕ್ಕಳಿಗೆ ಮಹಿಳೆಯರಿಗೆ ಆಹಾರ ಒದಗಿಸುವುದು ಮೂಲಭೂತ ಕರ್ತವ್ಯ, ಪ್ರತಿಯೊಬ್ಬರಿಗೂ ಆಹಾರದ ಹಕ್ಕು ಇದೆ ಎಂದರು.

ಸರ್ಕಾರಿ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಿಗೆ ಭೇಟಿದಾಗ ಸಮಸ್ಯೆಗಳನ್ನು ಅವಲೋಕಿಸಿ ಸಂಬಂದಪಟ್ಟ ಅಧಿಕಾರಿಗಳಿಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು,ಬಿಸಿನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ, ಸಮರ್ಪಕವಾಗಿ ಕಲ್ಪಿಸಬೇಕು. ದುರಸ್ಥಿ ಬಾಗಿಲ ಸರಿಪಡಿಸುವಿಕೆ, ಸೊಳ್ಳೆಪರದೆ, ಗ್ರಂಥಾಲಯ ವ್ಯವಸ್ಥೆ, ಗುಣಮಟ್ಟದ ಆಹಾರದ ಜೊತೆಗೆ ಶುಚಿತ್ವವನ್ನು ಕಾಪಾಡಬೇಕು ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ, ರಾಗಿ, ಗೋಧಿಯನ್ನು ಹೆಚ್ಚಾಗಿ ಶೇಖರಣೆ ಮಾಡಿರುವುದು ಕಂಡುಬಂದಿದೆ. ನ್ಯಾಯಬೆಲೆ ಅಂಗಡಿಯವರು ಗ್ರಾಹಕರ ಜೊತೆ ಸಂಯಮದಿಂದ ಮಾತನಾಡಬೇಕು. ಉಗ್ರಾಣದಲ್ಲಿ ಸ್ವಚ್ಚತೆ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಬೇಕು.

ರೈತ ಸಂಪರ್ಕ ಕೇಂದ್ರದಲ್ಲಿ ರಸಗೊಬ್ಬರ, ಔಷಧಿಗಳ ದಾಸ್ತಾ ಸಮರ್ಪಕವಾಗಿ ನಿರ್ವಹಿಸಬೇಕು.ವಯೋವೃದ್ಧರಿಗೆ ಸರಿಯಾದ ಸಮಯಕ್ಕೆ ಪೆನ್ಷನ್ ನೀಡಬೇಕು, ರೈತರನ್ನ ಕಚೇರಿಗಳಿಗೆ ಅಲೆದಾಡಿಸಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಾಸ್ಟೆಲ್ ಗಳಲ್ಲಿ ಅಡುಗೆ ತಯಾರಿಸುವವರಿಗೆ, ಬಡಿಸುವವರಿಗೆ ಹಾಗೂ ಅಂಗನವಾಡಿ, ಶಾಲೆ ಕಾಲೇಜುಗಳಲ್ಲಿ ಅಡುಗೆ ಮಾಡುವ ಎಲ್ಲರಿಗೂ ಕಡ್ಡಾಯವಾಗ ರಕ್ತ ಪರೀಕ್ಷೆ ಮಾಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಪಾರದರ್ಶಕತೆಯಿಂದ ಜವಾಬ್ದಾರಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲೆಯಲ್ಲಿ ಆ.11 ರಿಂದ 13 ವರೆಗೆ ನಾಲ್ಕು ತಾಲೂಕಿನ ವಿವಿಧ ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಿಗೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಸುರಕ್ಷತೆ, ಸ್ವಚ್ಚತೆ ಬಗ್ಗೆ ಪರಿಶೀಲನೆ ಕೈಗೊಂಡಿದ್ದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್‌ ಅನುರಾಧ, ಸಿ.ಎ.ಒ ಡಾ. ವಾಸಂತಿ ಅಮರ್‌, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್‌ ರಾವ್‌, ಮಾರುತಿ ಎಂ ದೊಡ್ಡಲಿಂಗಣ್ಣವರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

2 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

12 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

12 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

15 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ…

18 hours ago

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

24 hours ago