ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದ ವ್ಯಾಪಾರಿಗಳಿಗೆ ಒಟ್ಟು 23 ನೋಟಿಸ್ ಜಾರಿ ಮಾಡಿ, ಒಟ್ಟು ರೂ. 20,000 (ಇಪ್ಪತ್ತು ಸಾವಿರ)ಗಳ ದಂಡ ವಿಧಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಆಗಸ್ಟ್ 30 ಮತ್ತು 31 ರಂದು ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ಅಧಿಕಾರಿಗಳು ಆಹಾರ ಉದ್ದಿಮೆದಾರರಿಗೆ ತಿಳಿಸಿದರು.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…