ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ: ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದ ವ್ಯಾಪಾರಿಗಳಿಗೆ ಒಟ್ಟು 23 ನೋಟಿಸ್ ಜಾರಿ ಮಾಡಿ, ಒಟ್ಟು ರೂ. 20,000 (ಇಪ್ಪತ್ತು ಸಾವಿರ)ಗಳ ದಂಡ ವಿಧಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಆಗಸ್ಟ್ 30 ಮತ್ತು 31 ರಂದು ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.

ಆಹಾರ ಸಿದ್ಧಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು, ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಆಹಾರ ವ್ಯಾಪಾರಿಗಳಿಗೆ ಆಹಾರ ಸುರಕ್ಷತಾಧಿಕಾರಿಗಳು ಜಾಗೃತಿ ನೀಡಿ, ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಮತ್ತು ನೀರನ್ನು ಪೂರೈಸಬೇಕು, ಆಹಾರ ಉದ್ದಿಮೆಗಳಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳತಕ್ಕದ್ದು ಎಂದು ಅಧಿಕಾರಿಗಳು ಜಾಗೃತಿ ಮೂಡಿಸಿದರು.

ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ಅಧಿಕಾರಿಗಳು ಆಹಾರ ಉದ್ದಿಮೆದಾರರಿಗೆ ತಿಳಿಸಿದರು.

ಈ ಆಂದೋಲನದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

17 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago