ಆ.14 ರಂದು ಯುವನಿಧಿ ಹಾಗೂ ಸಂಚಾರಿ ಉದ್ಯೋಗ ನೋಂದಣಿ ವಿಶೇಷ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2025ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ ಯುವನಿಧಿ ಹಾಗೂ ಸಂಚಾರಿ ಉದ್ಯೋಗಕ್ಕೆ ನೋಂದಣಿ ಮಾಡಿಕೊಳ್ಳಲು ವಿಶೇಷ ಶಿಬಿರ ಆಯೋಜಿಸಲಾಗಿದೆ.

ಯುವ ನಿಧಿ ಹಾಗೂ ಸಂಚಾರಿ ಉದ್ಯೋಗ ನೋಂದಣಿ ಶಿಬಿರವು ಆಗಸ್ಟ್ 14 ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಶಿಬಿರ ನಡೆಯಲಿದೆ.

ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಬೆಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಯುವ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳು ಸೂಚಿತ ವಿದ್ಯಾರ್ಹತೆಗಳಲ್ಲಿ ತೇರ್ಗಡೆಯಾದ 180 ದಿನವಾದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ರೂ. 1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೂ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುತ್ತದೆ.

*ಸಂಚಾರಿ ಉದ್ಯೋಗಕ್ಕೆ ನೋಂದಣಿ* ಮಾಡಿಕೊಳ್ಳುವ ಉದ್ಯೋಗಾಕಾಂಕ್ಷಿಗಳು 10ನೇ ತರಗತಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಗತ್ಯ ದಾಖಲೆಗಳಾದ ಎಸ್.ಎಸ್.ಎಲ್.ಸಿ/ ಪಿಯುಸಿ/ ಪದವಿ ಮೂಲ ಅಂಕಪಟ್ಟಿ ಹಾಗೂ ನಕಲು ಪ್ರತಿಗಳು, ಜಾತಿ ದೃಢೀಕರಣ ಪತ್ರ (ಅನ್ವಯಿಸುವವರಿಗೆ ಮಾತ್ರ), ಆಧಾರ್ ಕಾರ್ಡ್ ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತೆಗೆದುಕೊಂಡು ಬರಬೇಕು. ಬೆಂಗಳೂರು ಗ್ರಾಮಾಂತರ, ನಗರ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿಇಒ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೀಣ್ಯ ತುಮಕೂರು ರಸ್ತೆ ಬೆಂಗಳೂರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು. ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ:132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago