ಆ. 30ಕ್ಕೆ ಗೃಹಲಕ್ಷ್ಮಿ ಯೋಜನೆ ಚಾಲನೆ: ಕಾರ್ಯಕ್ರಮವನ್ನ ಯಶಸ್ವಿಗೊಳಿಸಲು ಮನವಿ- ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ನಿಟ್ಟಿನಲ್ಲಿ 2023ರ ಆಗಸ್ಟ್ 30 ಬುಧವಾರ ಬೆಳಿಗ್ಗೆ 11:30ಕ್ಕೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಹಾಗೂ ಸಚಿವರುಗಳು ಲೋಕಾರ್ಪಣೆಗೊಳಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಕಾರ್ಯಕ್ರಮ ವೀಕ್ಷಣೆ ಮಾಡಲು ಟಿ.ವಿ/ಎಲ್.ಇ.ಡಿ ಪರದೆ ವ್ಯವಸ್ಥೆಗೊಳಿಸಲಾಗುತ್ತದೆ. ಫಲಾನುಭವಿಗಳು, ಚುನಾಯಿತ ಜನ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಆಯಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಶೇಷ ಸೂಚನೆ:- ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೊಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್‌ಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗುವುದು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago