ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್ 31 ರಂದು ಭಾನುವಾರ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪುರ ಬೆಸ್ಕಾಂ ಅಭಿಯಂತರರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆಗಸ್ಟ್ 31 ರಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1, 2 & 3, ಕೆಎಸ್ಎಸ್ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…