ಇಂಗ್ಲೆಂಡ್ ತಂಡವನ್ನು 7 ರನ್‍ಗಳಿಂದ ಮಣಿಸಿ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಫೈನಲ್‌ ಪ್ರವೇಶ: ಫೈನಲ್‌ ಯಾವಾಗ, ಯಾರ ನಡುವೆ, ಎಲ್ಲಿ ನಡೆಯುತ್ತೆ….?

ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಭಾರಿ ಮೊತ್ತವನ್ನು ದಾಖಲಿಸಿತ್ತು.

42 ಎಸೆತಗಳಲ್ಲಿ 89 ರನ್ ಗಳಿಸಿದ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು.

ಬೃಹತ್ ಮೊತ್ತದ ರನ್ ಚೇಸಿಂಗ್ ನಲ್ಲಿ ಇಂಗ್ಲೆಂಡ್ ತಂಡದ ಮೇಲೆ ಭಾರತದ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದ್ದರು. ಆದರೆ ಜಾಕೋಬ್ ಬೆಥೆಲ್ ಅವರ ಆಕರ್ಷಕ ಚೊಚ್ಚಲ ಶತಕ (48ಎಸೆತಗಳಲ್ಲಿ 105) ದ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡಿತ್ತು. ಆದರೂ ಇಂಗ್ಲೆಂಡ್ ತಂಡದ ಉಳಿದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥವಾಗಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಭಾರತದ ಎದುರು ಸೋಲೊಪ್ಪಿಕೊಂಡಿತು.

ಹೀಗಾಗಿ ಮಾರ್ಚ್ 8ರ ಭಾನುವಾರ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ.

ಭಾರತ 20 ಓವರ್ ಗಳಲ್ಲಿ 253/4, ಸಂಜು ಸ್ಯಾಮ್ಸನ್ 89(42), ಶಿವಂ ದುಬೆ 43(25), ಇಶಾನ್ ಕಿಶನ್ 39(18), ಹಾರ್ದಿಕ್ ಪಾಂಡ್ಯ 27(12), ತಿಲಕ್ ವರ್ಮಾ 21(7), ವಿಲ್ ಜಾಕ್ಸ್ 40ಕ್ಕೆ 2, ಆದಿಲ್ ರಶೀದ್ 41ಕ್ಕೆ 2.

ಇಂಗ್ಲೆಂಡ್ 20 ಓವರ್ ಗಳಲ್ಲಿ 246/7, ಜಾಕೋಬ್ ಬೆಥೆಲ್ 105(48), ವಿಲ್ ಜಾಕ್ಸ್ 35(20), ಜಾಸ್ ಬಟ್ಲರ್ 25(17), ಜೋಫ್ರಾ ಆರ್ಚರ್ ನಾಟೌಟ್ 19(4), ಹಾರ್ದಿಕ್ ಪಾಂಡ್ಯ 38ಕ್ಕೆ 2, ಜಸ್ಪ್ರೀತ್ ಬುಮ್ರಾ 33ಕ್ಕೆ 1.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 minutes ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

9 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

15 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

17 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago