ಇಂಗ್ಲೆಂಡ್ ತಂಡವನ್ನು 7 ರನ್‍ಗಳಿಂದ ಮಣಿಸಿ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಫೈನಲ್‌ ಪ್ರವೇಶ: ಫೈನಲ್‌ ಯಾವಾಗ, ಯಾರ ನಡುವೆ, ಎಲ್ಲಿ ನಡೆಯುತ್ತೆ….?

ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಭಾರಿ ಮೊತ್ತವನ್ನು ದಾಖಲಿಸಿತ್ತು.

42 ಎಸೆತಗಳಲ್ಲಿ 89 ರನ್ ಗಳಿಸಿದ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು.

ಬೃಹತ್ ಮೊತ್ತದ ರನ್ ಚೇಸಿಂಗ್ ನಲ್ಲಿ ಇಂಗ್ಲೆಂಡ್ ತಂಡದ ಮೇಲೆ ಭಾರತದ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದ್ದರು. ಆದರೆ ಜಾಕೋಬ್ ಬೆಥೆಲ್ ಅವರ ಆಕರ್ಷಕ ಚೊಚ್ಚಲ ಶತಕ (48ಎಸೆತಗಳಲ್ಲಿ 105) ದ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡಿತ್ತು. ಆದರೂ ಇಂಗ್ಲೆಂಡ್ ತಂಡದ ಉಳಿದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥವಾಗಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಭಾರತದ ಎದುರು ಸೋಲೊಪ್ಪಿಕೊಂಡಿತು.

ಹೀಗಾಗಿ ಮಾರ್ಚ್ 8ರ ಭಾನುವಾರ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ.

ಭಾರತ 20 ಓವರ್ ಗಳಲ್ಲಿ 253/4, ಸಂಜು ಸ್ಯಾಮ್ಸನ್ 89(42), ಶಿವಂ ದುಬೆ 43(25), ಇಶಾನ್ ಕಿಶನ್ 39(18), ಹಾರ್ದಿಕ್ ಪಾಂಡ್ಯ 27(12), ತಿಲಕ್ ವರ್ಮಾ 21(7), ವಿಲ್ ಜಾಕ್ಸ್ 40ಕ್ಕೆ 2, ಆದಿಲ್ ರಶೀದ್ 41ಕ್ಕೆ 2.

ಇಂಗ್ಲೆಂಡ್ 20 ಓವರ್ ಗಳಲ್ಲಿ 246/7, ಜಾಕೋಬ್ ಬೆಥೆಲ್ 105(48), ವಿಲ್ ಜಾಕ್ಸ್ 35(20), ಜಾಸ್ ಬಟ್ಲರ್ 25(17), ಜೋಫ್ರಾ ಆರ್ಚರ್ ನಾಟೌಟ್ 19(4), ಹಾರ್ದಿಕ್ ಪಾಂಡ್ಯ 38ಕ್ಕೆ 2, ಜಸ್ಪ್ರೀತ್ ಬುಮ್ರಾ 33ಕ್ಕೆ 1.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 hour ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

20 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago