ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಭಾರಿ ಮೊತ್ತವನ್ನು ದಾಖಲಿಸಿತ್ತು.
42 ಎಸೆತಗಳಲ್ಲಿ 89 ರನ್ ಗಳಿಸಿದ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು.
ಬೃಹತ್ ಮೊತ್ತದ ರನ್ ಚೇಸಿಂಗ್ ನಲ್ಲಿ ಇಂಗ್ಲೆಂಡ್ ತಂಡದ ಮೇಲೆ ಭಾರತದ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದ್ದರು. ಆದರೆ ಜಾಕೋಬ್ ಬೆಥೆಲ್ ಅವರ ಆಕರ್ಷಕ ಚೊಚ್ಚಲ ಶತಕ (48ಎಸೆತಗಳಲ್ಲಿ 105) ದ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡಿತ್ತು. ಆದರೂ ಇಂಗ್ಲೆಂಡ್ ತಂಡದ ಉಳಿದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥವಾಗಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಭಾರತದ ಎದುರು ಸೋಲೊಪ್ಪಿಕೊಂಡಿತು.
ಹೀಗಾಗಿ ಮಾರ್ಚ್ 8ರ ಭಾನುವಾರ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ.
ಭಾರತ 20 ಓವರ್ ಗಳಲ್ಲಿ 253/4, ಸಂಜು ಸ್ಯಾಮ್ಸನ್ 89(42), ಶಿವಂ ದುಬೆ 43(25), ಇಶಾನ್ ಕಿಶನ್ 39(18), ಹಾರ್ದಿಕ್ ಪಾಂಡ್ಯ 27(12), ತಿಲಕ್ ವರ್ಮಾ 21(7), ವಿಲ್ ಜಾಕ್ಸ್ 40ಕ್ಕೆ 2, ಆದಿಲ್ ರಶೀದ್ 41ಕ್ಕೆ 2.
ಇಂಗ್ಲೆಂಡ್ 20 ಓವರ್ ಗಳಲ್ಲಿ 246/7, ಜಾಕೋಬ್ ಬೆಥೆಲ್ 105(48), ವಿಲ್ ಜಾಕ್ಸ್ 35(20), ಜಾಸ್ ಬಟ್ಲರ್ 25(17), ಜೋಫ್ರಾ ಆರ್ಚರ್ ನಾಟೌಟ್ 19(4), ಹಾರ್ದಿಕ್ ಪಾಂಡ್ಯ 38ಕ್ಕೆ 2, ಜಸ್ಪ್ರೀತ್ ಬುಮ್ರಾ 33ಕ್ಕೆ 1.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…