ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ: ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಗೆ ಪದಕ

 

ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ (ಐ ಟಿ ಎಫ್) ಅಹಮದಾಬಾದ್, ಗುಜರಾತ್ ನಲ್ಲಿ ನಡೆದ 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಮತ್ತು ಎರಡನೆಯ IL-DO ಮಾರ್ಷಲ್ ಆರ್ಟ್ಸ್ ನ್ಯಾಷನಲ್ ಡಿಸೆಂಬರ್ 23 ರಿಂದ 31 ವರೆಗೆ ನಡೆದಿತ್ತು. ಇದರಲ್ಲಿ 18ಕ್ಕೂ ಹೆಚ್ಚು ರಾಜ್ಯಗಳು ಭಾಗವಹಿಸಿದ್ದವು, ಕರ್ನಾಟಕದಿಂದ ಕೊಡಿಗೆಹಳ್ಳಿ ನಿವಾಸಿಗಳಾದ ಶ್ರೀ  ಶ್ರೀ ರವಿಶಂಕರ್ ವಿದ್ಯಾ ಮಂದಿರ (ವಿದ್ಯಾರಣ್ಯಪುರ) ವಿದ್ಯಾರ್ಥಿಗಳಾದ ಸೌಜನ್ಯ ಮಂಜುನಾಥ್ 11ನೇ ತರಗತಿ ಕಾಮರ್ಸ್ ವಿಭಾಗ, 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, ಹಾಗೂ IL-DO ನ್ಯಾಷನಲ್ ನಲ್ಲಿ ಒಂದು ಕಂಚಿನ ಪದಕ ಗೆದ್ದು ಜಯಶಾಲಿ ಆಗಿದ್ದಾರೆ.

ಶಶಾಂಕ್ ಮಂಜುನಾಥ್ 9ನೆ ತರಗತಿ , 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ, 3 ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, IL-DO ನ್ಯಾಷನಲ್ ನಲ್ಲಿ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದು ನಮ್ಮ ಕರ್ನಾಟಕಕ್ಕೆ ಜಯ ತಂದುಕೊಟ್ಟಿದ್ದಾರೆ.

ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಸಹೋದರರು ತಮ್ಮ ಗುರುಗಳಾದ ಪ್ರದೀಪ್ ಜನಾರ್ಧನ್ ಮತ್ತು ಅವರ ತಂದೆ ತಾಯಿ ಹಾಗೂ ರಾಜ್ಯಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago