ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.
ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.
ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.
ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.
ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…