ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

 

ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.

ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.

ಇದು ನೈಜ ಘಟನೆಯಲ್ಲ ಬದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎನ್ ಶಿವಶಂಕರ್ ಅವರ ಅಧ್ಯಕ್ಷತೆ ಮತ್ತು ಮಾರ್ಗದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ನಡೆದ ಅಣಕು ಪ್ರದರ್ಶನವಾಗಿತ್ತು.

ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.

ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ವಿಪತ್ತು ಪರಿಣಿತರಾದ ಎ. ಬಸವರಾಜು, ಕಾರ್ಖಾನೆಗಳ ಮತ್ತು ಬಾಯ್ಲರ್‌ಗಳ ಇಲಾಖೆಯ ಜಂಟಿ ನಿರ್ದೇಶಕರಾದ ನವನೀತ್ ಮೋಹನ್ ಮತ್ತು ಉಪ ನಿರ್ದೇಶಕರಾದ ಎಂ ಎ ಸೋಮಶೇಖರ್ ಈ ಅಣುಕು ಪ್ರದರ್ಶನ ಕಾರ್ಯಕ್ರಮದ ವೀಕ್ಷಕರಾಗಿ ಭಾಗವಹಿಸಿ, ಅಣುಕು ಪ್ರದರ್ಶನ ನಡೆಸುವ ಬಗ್ಗೆ ಹಾಗೂ ಸಿಬ್ಬಂದಿ ಸುರಕ್ಷತೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

6 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago