ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.
ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.
ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.
ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.
ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…