ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

 

ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.

ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.

ಇದು ನೈಜ ಘಟನೆಯಲ್ಲ ಬದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎನ್ ಶಿವಶಂಕರ್ ಅವರ ಅಧ್ಯಕ್ಷತೆ ಮತ್ತು ಮಾರ್ಗದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ನಡೆದ ಅಣಕು ಪ್ರದರ್ಶನವಾಗಿತ್ತು.

ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.

ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ವಿಪತ್ತು ಪರಿಣಿತರಾದ ಎ. ಬಸವರಾಜು, ಕಾರ್ಖಾನೆಗಳ ಮತ್ತು ಬಾಯ್ಲರ್‌ಗಳ ಇಲಾಖೆಯ ಜಂಟಿ ನಿರ್ದೇಶಕರಾದ ನವನೀತ್ ಮೋಹನ್ ಮತ್ತು ಉಪ ನಿರ್ದೇಶಕರಾದ ಎಂ ಎ ಸೋಮಶೇಖರ್ ಈ ಅಣುಕು ಪ್ರದರ್ಶನ ಕಾರ್ಯಕ್ರಮದ ವೀಕ್ಷಕರಾಗಿ ಭಾಗವಹಿಸಿ, ಅಣುಕು ಪ್ರದರ್ಶನ ನಡೆಸುವ ಬಗ್ಗೆ ಹಾಗೂ ಸಿಬ್ಬಂದಿ ಸುರಕ್ಷತೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

3 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

3 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

7 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

8 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

14 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

15 hours ago