ಇಂಡಿಯಾ ಸ್ಕಿಲ್ಸ್  ಕರ್ನಾಟಕ 2023-24ರ ಸ್ಪರ್ಧೆಗೆ ಆಸಕ್ತ ಅಭ್ಯರ್ಥಿಗಳು ನೋಂದಾಯಿಸಿ

ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.

22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ, 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿರುತ್ತದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ.

ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು.

ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ ಸಂ 18005999918ನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

4 minutes ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

13 minutes ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

20 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago