ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.
22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ, 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿರುತ್ತದೆ.
2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ.
ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.
ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು.
ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ ಸಂ 18005999918ನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…