ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.
22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ, 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿರುತ್ತದೆ.
2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ.
ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.
ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು.
ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ ಸಂ 18005999918ನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…