ಇಂಡಿಯಾ ಸ್ಕಿಲ್ಸ್  ಕರ್ನಾಟಕ 2023-24ರ ಸ್ಪರ್ಧೆಗೆ ಆಸಕ್ತ ಅಭ್ಯರ್ಥಿಗಳು ನೋಂದಾಯಿಸಿ

ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.

22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ, 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿರುತ್ತದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ.

ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು.

ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ ಸಂ 18005999918ನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 hour ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

11 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

11 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

22 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

24 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago