Categories: ಶಿಕ್ಷಣ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ತಾಲೂಕಿನಲ್ಲಿ 3,963 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ: ಶುಭ ಕೋರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ತಾಲೂಕು ಮಟ್ಟದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದಾ ಅನೀಸ್ ತಿಳಿಸಿದ್ದಾರೆ.

ನೋಂದಾಯಿತ ಅಂಕಿಅಂಶ

ತಾಲ್ಲೂಕಿನಲ್ಲಿ 17 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನರಹಿತ ಪ್ರೌಢಶಾಲೆಗಳು ಸೇರಿದಂತೆ ಒಟ್ಟು 63 ಪ್ರೌಢಶಾಲೆಗಳಿದ್ದು, ಪ್ರೌಢಶಾಲೆಗಳಿಂದ ಬಾಲಕರು 1986, ಬಾಲಕಿಯರು 1977  ಒಟ್ಟು 3963 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ವೆಬ್ ಕಾಸ್ಟಿಂಗ್: 

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಮೊಬೈಲ್ ಸ್ವಾಧೀನಾಧಿಕಾರಿ ನೇಮಕ, ಸಿಸಿಟಿವಿ ಅಳವಡಿಕೆ, ಪರೀಕ್ಷಾ ಕೇಂದ್ರಗಳಲ್ಲಿನ ಚಟುವಟಿಕೆ ವೀಕ್ಷಣೆ ಮಾಡಲು ಜಿಲ್ಲಾ ವೀಕ್ಷಣಾ ಕೊಠಡಿ ಸ್ಥಾಪನೆ ಮಾಡಲಾಗಿದೆ.

ಮೂಲಭೂತ ಸೌಕರ್ಯ:

ಪರೀಕ್ಷಾ ಕೇಂದ್ರಗಳ 100 ಮೀ.‌ ಅಂತರದಲ್ಲಿ ನಿಷೇಧಾಜ್ಞೆ ಜಾರಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಅನಿರೀಕ್ಷಿತ ಭೇಟಿ. ಪ್ರತಿ ಕೇಂದ್ರಕ್ಕೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗಿದೆ, ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನ ಅಳವಡಿಸಿಲಾಗಿದೆ.

ತಾಲೂಕಿನ ಪರೀಕ್ಷಾ ಕೇಂದ್ರಗಳು:

ಸರ್ಕಾರಿ ಪದವಿ ಪೂರ್ವ ಕಾಲೇಜು, ದೊಡ್ಡಬಳ್ಳಾಪುರ ನಗರ, ಶ್ರೀ ದೇವರಾಜ ಅರಸು ಪ್ರೌಢಶಾಲೆ, ಕರ್ಮಲ್ ಜ್ಯೋತಿ ಪ್ರೌಢಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆ, ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ, ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೆಳೆಕೋಟೆ ಕ್ರಾಸ್‌ ನ ಎಸ್ ಜೆಸಿಆರ್ ಪ್ರೌಢಶಾಲೆ, ದೊಡ್ಡಬೆಳವಂಗಲದ ಕರ್ನಾಟಕ ಪಬ್ಲಿಕ್ ಶಾಲೆ, ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ, ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಚೆನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಡನೂರು ಕೈಮರ ಶ್ರೀರಾಮ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ

* 25-ಮಾರ್ಚ್- ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.

* 27-ಮಾರ್ಚ್- ಸಮಾಜ ವಿಜ್ಞಾನ

* 30-ಮಾರ್ಚ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

* 2-ಏಪ್ರಿಲ್- ಗಣಿತ/*ಸಮಾಜಶಾಸ್ತ್ರ

* 3-ಏಪ್ರಿಲ್- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV ನ ಅಂಶಗಳು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು-2, ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಂಶಗಳು – IV, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಂಶಗಳು-IV, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಂಶಗಳು, ANSI ‘C’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ

* 4-ಏಪ್ರಿಲ್- ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು

* 6-ಏಪ್ರಿಲ್- ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ಇಂದಿನಿಂದ ಆರಂಭವಾದ ಎಸ್.ಎಸ್.ಎಲ್‌‌.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಯಶಸ್ಸು ನಿಮ್ಮದಾಗಲಿ…
ಆಲ್_ದಿ_ಬೆಸ್ಟ್💐 ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರು ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

9 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

14 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago