ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದಿನಿಂದ (ಏ.12 ಮತ್ತು 13) ಭಾನುವಾರದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ.
ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜ ಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣ ಗೌಡರ ಹೆಸರನ್ನು ಇಡಲಾಗಿದೆ. ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ. ಕೆಂಪಣ್ಣಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್ ಮುನಿರಾಜ್ ಗಣ್ಯರು ಭಾಗವಹಿಸಲಿದ್ದಾರೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭು ದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಚಿಂತಕ ಕೆ.ರಾಜಕುಮಾರ್ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಆತಂಕಗಳು ಕುರಿತ ವಿಚಾರಗೋಷ್ಠಿಯು ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾವಯವ ಕೃಷಿ ತಜ್ಞ ತಜ್ಞ ಡಾ.ಶಿವನಾಪುರ ರಮೇಶ್, ಜಗನ್ನಾಥ್ ಪ್ರಕಾಶ್ ವಿಷಯ ಮಂಡನೆ ಮಾಡುವರು. ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸನ್ಮಾ ಹಾಗೂ ಸಮಾರೋಪ ಆಯೋಜನೆಗೊಂಡಿವೆ ವಿವರಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…