ಇಂದಿನಿಂದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಆಹ್ವಾನ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ 2000/- ರೂಗಳನ್ನು ಸಂದಾಯ ಮಾಡುವ ಕಾರ್ಯಕ್ರಮವಾಗಿರುತ್ತದೆ. 2023ರ ಜುಲೈ 20 ರಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸಿರುವ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ರಿಟರ್ನ್ಸ್ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ ಸಹಾಯವಾಣಿ ಸಂಖ್ಯೆ (helpline number): 1902 ಕ್ಕೆ ಬೆಳಿಗ್ಗೆ 9-00 ರಿಂದ 6-00 ಗಂಟೆಯವರೆಗೆ ಕರೆ ಮಾಡಬಹುದು.

ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು:

ಪಡಿತರ ಚೀಟಿಯ ಸಂಖ್ಯೆ; ಯಜಮಾನಿಯ ಹಾಗೂ ಯಜಮಾನಿಯ ಪತಿಯ ಆಧಾರ್ ಕಾರ್ಡ್ ಸಂಖ್ಯೆ;
ಯಜಮಾನಿಯ ಬ್ಯಾಂಕ್ ಖಾತೆಯ ಪಾಸ್ ಬುಕ್.

ನೋಂದಣಿ ವಿಧಾನ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಫಲಾನುಭವಿಗಳು 103 ಗ್ರಾಮ ಒನ್ ಕೇಂದ್ರಗಳಲ್ಲಿ, 3 ಕರ್ನಾಟಕ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿರುವ 101 ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹಾಗೂ 23 ನಗರ ಪ್ರದೇಶದ ನೋಂದಣಿ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೇ ಪ್ರಜಾ ಪ್ರತಿನಿಧಿ (citizen volunteers) ಹೆಸರಿನಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಇವರ ಮೂಲಕ ಸಹ ಮೊಬೈಲ್ ಆಪ್ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಪಡಿತರ ಚೀಟಿಗಳ ಡೇಟಾ ಆಧರಿಸಿ ನೊಂದಣಿಗೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ನೊಂದಾಯಿತಿ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖಾಂತರ ಯಾವ ಕೇಂದ್ರಕ್ಕೆ ಯಾವ ದಿನಾಂಕ, ಯಾವ ಸಮಯಕ್ಕೆ ನೋಂದಣಿ ಮಾಡಿಸಲು ಹೋಗಬೇಕು ಎಂಬ ಸಂದೇಶ ಬರುತ್ತದೆ.

ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

ನಿಗದಿತ ಸಮಯಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಸಂಜೆ 5.00 ಗಂಟೆ ನಂತರ ತೆರಳಿ ನೋಂದಾಯಿಸಿಕೊಳ್ಳಬಹುದು.

ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಸಿದಾಗ ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಕೇಂದ್ರದಲ್ಲೇ ನೀಡಲಾಗುವುದು, ಪ್ರಜಾ ಪ್ರತಿನಿಧಿಗಳ ಮೂಲಕ ನೋಂದಾಯಿಸಿದರೆ ಮಂಜೂರಾತಿ ಪತ್ರವನ್ನು ನಂತರ ಪ್ರಜಾ ಪ್ರತಿನಿಧಿಗಳ ಮೂಲಕ ತಲುಪಿಸಲಾಗುವುದು.

ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 hour ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

3 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

5 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago